IMG 20230929 WA0003

ಮಧುಗಿರಿ:ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ……!

DISTRICT NEWS ತುಮಕೂರು

ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ……

ಮಧುಗಿರಿ. ಐಡಿ ಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಇಂದು ಸರ್ಕಾರಿ ಆದೇಶದಂತೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾರ್ಯದರ್ಶಿ ಹಾಗೂ ಸಿಬ್ಬಂದಿ ಶಾಲಾ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸ್ವಚ್ಛತೆಯ ಸೇವೆ ಪ್ರತಿಜ್ಞಾವಿಧಿ ಬೋಧಿಸಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎ.ಪ್ರಕಾಶ್ ರವರು ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ನಂತರ ಗ್ರಾಮ ಪಂಚಾಯಿತಿಯ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತೆಯರು ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಸದಸ್ಯರುಗಳು ಶಾಲಾ ಆವರಣದಲ್ಲಿ ಸ್ವಚ್ಛತೆ ಮಾಡುವುದರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಭಾಗ್ಯಮ್ಮ ಗ್ರಾಮ ಪಂಚಾಯತಿ ಸದಸ್ಯರುಗಳಾದ ಜಿಲಾನ್ ಸಾಬ್ ನರಸಿಂಹಮೂರ್ತಿ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪ್ರಕಾಶ್ .ಕಾರ್ಯದರ್ಶಿ ನರಸಿಂಹಲು .ಕಂಪ್ಯೂಟರ್ ಆಪರೇಟರ್ ಕಮಲೇಶ್. ಬಿಲ್ ಕಲೆಕ್ಟರ್. ಸಾಯಿ ಕುಮಾರ್. ಮುಖ್ಯ ಶಿಕ್ಷಕರಾದ ಸಂಜಯ್. ಶಿಕ್ಷಕರುಗಳಾದ ನಾಗಪ್ಪ .ಅಂಗನವಾಡಿ ಕಾರ್ಯಕರ್ತೆಯ ದ ಲಕ್ಷ್ಮಿ ನರಸಮ್ಮ
ನಾಗಮಣಿ. ಅಂಗನವಾಡಿ ಕಾರ್ಯಕರ್ತೆ. ಗ್ರಂಥ ಪಾಲಕರಾದ ಅನಿತಾ ಲಕ್ಷ್ಮಿ. ಆಶಾ ಕಾರ್ಯಕರ್ತೆಯರು ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ನಾಗರಾಜು.ವಿದ್ಯಾರ್ಥಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ. ಲಕ್ಷ್ಮಿಪತಿ ದೊಡ್ಡ ಯ ಲ್ಕೂರ್