IMG 20231013 WA0011

Karnataka : ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ….!

POLATICAL STATE

ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.

ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಈಗ ಮಳೆ ಇಲ್ಲದೆ ಉತ್ಪಾದನೆ ಕುಂಠಿತ ಆಗಿದೆ ಎನ್ನುವುದನ್ನು ನಮ್ಮ ರೈತರಿಗೆ ಮನವರಿಕೆ ಮಾಡಿ: ಸಿಎಂ ಖಡಕ್ ಸೂಚನೆ

ವಿದ್ಯುತ್ ಖರೀದಿ ಕುರಿತಂತೆ ಮುಖ್ಯ ಮಂತ್ರಿಗಳ ಅಧ್ಯಕ್ಷ ತೆಯಲ್ಲಿ ಇಂದು ಸಭೆ

ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಅಕ್ಟೋಬರ್ 13: ಮಳೆ ಕಡಿಮೆಯಾಗುವುದರಿಂದ ಹಾಗೂ
ಬೇಸಿಗೆ ರೀತಿಯಲ್ಲಿ ವಿದ್ಯುತ್ತಿಗೆ ಬೇಡಿಕೆ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ವಿದ್ಯುತ್ ಉತ್ಪಾದನೆ ಕಡಿಮೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗುತ್ತಿದೆ.

  • ಗರಿಷ್ಠ ಬೇಡಿಕೆ 15 ಸಾವಿರದಿಂದ 16 ಸಾವಿರ ಮೆಗಾ ವಾಟ್ ಗೆ ತಲುಪಿದೆ.
  • ಕಳೆದ ವರ್ಷ ಇದೇ ಅವಧಿಗೆ 9 ಸಾವಿರದಿಂದ 10 ಸಾವಿರ ಮೆ.ವಾ. ಇತ್ತು

ಬೇಡಿಕೆ ಇರುವುದರಿಂದ ತೊಂದರೆಯಾಗಿದೆ. ವಿದ್ಯುತ್ ನ್ನು ಹೊರಗಿನಿಂದ ಹೇಗೆ ಖರೀದಿಸುವುದು ಎಂದು ಚರ್ಚಿಸಲು ಇಂದು ಸಭೆ ಕರೆಯಲಾಗಿದೆ ಎಂದರು.

ವಿದ್ಯುತ್ ಉತ್ಪಾದನೆ ಮಾಡುವವರು ಸರ್ಕಾರಕ್ಕೆ ಮಾರಾಟ ಮಾಡಬೇಕು, ಬೇರೆಲ್ಲಿಯೂ ಮಾರಬಾರದೆಂದು ನಿನ್ನೆ ಅದೇಶವನ್ನೂ ಮಾಡಲಾಗಿದೆ ಎಂದು ತಿಳಿಸಿದರು.

ಬಿಜೆಪಿಗೆ ವಸ್ತುಸ್ಥಿತಿ ತಿಳಿದಿಲ್ಲ
ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಿಜೆಪಿಯವರು ಹೇಳಿದ್ದಕ್ಕೆಲ್ಲಾ ಉತ್ತರ ನೀಡಲು ಆಗುವುದಿಲ್ಲ. ಅವರು ರಾಜಕೀಯವಾಗಿ ಮಾತನಾಡುತ್ತಾರೆ. ವಸ್ತುಸ್ಥಿತಿ ಅವರಿಗೆ ತಿಳಿದಿದೆಯೇ. ಮಳೆ ಇಲ್ಲದೆ ಬರಗಾಲ ಬಂದು ತೊಂದರೆಯಾಗಿದೆ. ಆದರೂ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ.ಅವರು ಹೇಳಿದಂತೆ ಸಂಪೂರ್ಣ ಲೋಡ್ ಶೆಡ್ಡಿಂಗ್ ಆಗಿಲ್ಲ. ಮೂರು ಫೇಸ್ ನಲ್ಲಿ 7 ಗಂಟೆ ವಿದ್ಯುತ್ ನೀಡಬೇಕೆಂದಿರುವುದನ್ನು ಕೊಡಲು ಆಗುತ್ತಿಲ್ಲ ಎಂಬ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 13-10-2023 ರಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯಲ್ಲ: ಎಸ್ಕಾಂ MD ಗಳಿಗೆ ಹೊಣೆ ಮಾಡಿ: ಸಿಎಂ ಖಡಕ್ ಸೂಚನೆ

ಹಿಂದಿನ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ಈಗ ಮಳೆ ಇಲ್ಲದೆ ಉತ್ಪಾದನೆ ಕುಂಠಿತ ಆಗಿದೆ ಎನ್ನುವುದನ್ನು ನಮ್ಮ ರೈತರಿಗೆ ಮನವರಿಕೆ ಮಾಡಿ: ಸಿಎಂ ಖಡಕ್ ಸೂಚನೆ

ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸುವ ವೇಳೆಯಲ್ಲಿ ಹಲವು ಜಿಲ್ಲೆಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗಳನ್ನು ಪ್ರಸ್ತಾಪಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

20231013 214048

ಹಿಂದಿನ ಸರ್ಕಾರದಲ್ಲಿ ಉತ್ತಮವಾದ ಅಗತ್ಯ ಮಳೆ ಆಗಿದ್ದರೂ ವಿದ್ಯುತ್ ಉತ್ಪಾದನೆ ಮಾಡಲಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಮಳೆ ಕೊರತೆ ಆಗಿ, ಬರಗಾಲ ಬಂದಿದೆ. ಇದನ್ನು ರೈತರಿಗೆ ಮನವರಿಕೆ ಮಾಡಿಸಬೇಕು. ರೈತರಿಗೆ ಯಾವ ವೇಳೆ ಎಷ್ಟು ವಿದ್ಯುತ್ ಅಗತ್ಯವಿದೆ ಎನ್ನುವುದನ್ನು ಸರಿಯಾಗಿ ಅರ್ಥಮಾಡಿಕೊಂಡು ಇರುವ ವಿದ್ಯುತ್ ಅನ್ನೇ ಅವರಿಗೆ ಅಗತ್ಯ ವೇಳೆಯಲ್ಲಿ ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ವಿದ್ಯುತ್ ಕಳ್ಳತನ ಮತ್ತು ವಿದ್ಯುತ್ ಸೋರಿಕೆ ಬಗ್ಗೆ ಏನು ಕ್ರಮ ಕೈಗೊಂಡಿದ್ದೀರಿ ? ವಿಚಕ್ಷಣಾ ದಳದಲ್ಲಿ ಎಷ್ಟು SP ಗಳು ಇದ್ದೀರಿ ? ಏನು ಮಾಡುತ್ತಿದ್ದೀರಿ? ಇವರು ಎಷ್ಟು ವಿದ್ಯುತ್ ಕಳ್ಳತನ ಪತ್ತೆ ಹಚ್ಚಿದ್ದಾರೆ ಎನ್ನುವುದನ್ನು ನಿಗಾ ವಹಿಸಿ ಕ್ರಿಯಾಶೀಲವಾಗಿ ಕೆಲಸ ಮಾಡಲು ಸೂಚನೆ ನೀಡಿ ಎನ್ನುವ ನಿರ್ದೇಶನವನ್ನು ಮುಖ್ಯಮಂತ್ರಿಗಳು ನೀಡಿದರು.

IMG 20231013 WA0014

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 13-10-2023 ರಂದು ನಡೆದ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು

  1. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ವಿದ್ಯುತ್‌ ಬೇಡಿಕೆ ಗಣನೀಯವಾಗಿ ಹೆಚ್ಚಿರುವುದರಿಂದ ರೈತರಿಗೆ ಪ್ರತಿದಿನ ಮೂರು ಪಾಳಿಗಳಲ್ಲಿ ನಿರಂತರ ಐದು ಗಂಟೆಗಳ ಕಾಲ ವಿದ್ಯುತ್‌ ಪೂರೈಕೆ ಮಾಡುವಂತೆ ಹಾಗೂ ಲೋಡ್‌ ಶೆಡ್ಡಿಂಗ್‌ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಸ್ಕಾಂಗಳ ಎಂ.ಡಿ.ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
  2. ಕೃಷಿ ಕ್ಷೇತ್ರದಲ್ಲಿ ವಿದ್ಯುತ್‌ಗೆ ಬೇಡಿಕೆ ಹೆಚ್ಚಾಗಿದ್ದು, ರೈತರಿಗೆ ಕನಿಷ್ಠ ಐದು ಗಂಟೆ ನಿರಂತರ ವಿದ್ಯುತ್‌ ಒದಗಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
  3. ಲಭ್ಯವಿರುವ ವಿದ್ಯುತ್ತಿನ ದಕ್ಷ ಹಂಚಿಕೆಯೂ ಅತಿ ಮುಖ್ಯವಾಗಿದ್ದು, ಎಸ್ಕಾಂಗಳ ಎಂ.ಡಿ.ಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಿ ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಬೇಕು. ಎಲ್ಲ ಮುಖ್ಯ ಎಂಜಿನಿಯರುಗಳನ್ನು ಜಿಲ್ಲೆಗೊಬ್ಬರಂತೆ ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದ್ದು, ಅವರು ನಿರಂತರ 5 ಗಂಟೆ ವಿದ್ಯುತ್‌ ಪೂರೈಕೆ ಯಾವುದೇ ಅಡಚಣೆಯಿಲ್ಲದೆ ಆಗುವಂತೆ ಖಾತರಿಪಡಿಸಬೇಕು ಎಂದು ಸೂಚಿಸಿದರು.
  4. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಇಂದಿನ ಸಭೆಯ ತೀರ್ಮಾನಗಳ ಪಾಲನೆಯಾಗುತ್ತಿರುವುದನ್ನು ಖಾತರಿಪಡಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
  5. ಕಳೆದ ಐದು ವರ್ಷಗಳಿಂದ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯ ಹೆಚ್ಚಳ ಕೇವಲ 4000 ಮೆಗಾವ್ಯಾಟ್ ನಷ್ಟು ಮಾತ್ರ ಇದೆ. ರಾಜ್ಯದ ಒಟ್ಟಾರೆ ವಿದ್ಯುತ್‌ ಉತ್ಪಾದನಾ ಸಾಮರ್ಥ್ಯ 32,000 ಮೆಗಾವ್ಯಾಟ್‌ ಇದ್ದರೂ ಇದರಲ್ಲಿ 16 ಸಾವಿರ ಮೆಗಾವ್ಯಾಟ್‌ ಸೌರ ವಿದ್ಯುತ್‌ ಆಗಿದ್ದು, ಇದು ಹಗಲು ಹೊತ್ತಿನಲ್ಲಿ ಮಾತ್ರ ಉತ್ಪಾದನೆ ಆಗುವುದರಿಂದ ಬೇಡಿಕೆ ನಿರ್ವಹಣೆಯಲ್ಲಿ ವ್ಯತ್ಯಯವಾಗುತ್ತಿದೆ. ಜೊತೆಗೆ ಕಲ್ಲಿದ್ದಲಿನಲ್ಲಿ ಕೆಲವು ಸಮಸ್ಯೆಗಳಿದ್ದುದನ್ನು ನಿವಾರಿಸಲಾಗಿದ್ದು, ಇದೀಗ ಆಮದು ಕಲ್ಲಿದ್ದಲು ಖರೀದಿಗೆ ಟೆಂಡರ್‌ ಕರೆಯಲಾಗಿದೆ ಎಂದು ಅಧಿಕಾರಿಗಳು ವಿವರಿಸಿದರು.
  6. IEX/ BILATERAL ನಲ್ಲಿ ವಿದ್ಯುತ್‌ ಪಡೆಯಲು ಕ್ರಮ
    ನವೆಂಬರ್‌ನಿಂದ ಉತ್ತರ ಪ್ರದೇಶದಿಂದ 300 ಮೆ.ವ್ಯಾ., ಪಂಜಾಬ್‌ ನಿಂದ 600 ಮೆ.ವ್ಯಾ. ವಿದ್ಯುತ್‌ ಪಡೆಯಲಾಗುವುದು. ಕೆ.ಇ.ಆರ್.ಸಿ.. ಅನುಮೋದನೆಯೊಂದಿಗೆ 1500 ಮೆಗಾವ್ಯಾಟ್‌ ಅಲ್ಪಾವಧಿ ವಿದ್ಯುತ್‌ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
  7. ರಾಜ್ಯದಲ್ಲಿನ ವಿದ್ಯುತ್‌ ಉತ್ಪಾದಕರಿಂದ ವಿದ್ಯುತ್‌ ಪಡೆಯಲು ರಾಷ್ಟ್ರೀಯ ವಿಪತ್ತಿನಡಿಯಲ್ಲಿ ವಿದ್ಯುತ್‌ ಕಾಯ್ದೆಯ ಸೆಕ್ಷನ್‌ 11ನ್ನು ಜಾರಿಗೊಳಿಸಲಾಗಿದೆ. ಆ ಮೂಲಕ ವಿದ್ಯುತ್‌ ಕೊರತೆಯನ್ನು ನಿವಾರಿಸಲಾಗುವುದು ಎಂದು ಅಧಿಕಾರಿಗಳು ವಿವರಿಸಿದರು.
  8. ದಕ್ಷಿಣದ ಎಲ್ಲ ರಾಜ್ಯಗಳಲ್ಲಿ ವಿದ್ಯುತ್‌ ಕೊರತೆ ತೀವ್ರವಾಗಿದೆ. ಪ್ರತಿ ವರ್ಷ ನೀವು contingency plan ಹೊಂದಿರಬೇಕು. ಯುದ್ಧ ಕಾಲೇ ಶಸ್ತ್ರಾಭ್ಯಾಸ ಎಂಬಂತೆ ಕಾರ್ಯಪ್ರವೃತ್ತರಾದರೆ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಎಚ್ಚರಿಸಿದರು.
  9. ಶೇ.13 ರಷ್ಟು ವಿದ್ಯುತ್‌ ವಿತರಣಾ ನಷ್ಟವಾಗುತ್ತಿದೆ. ವಿದ್ಯುತ್‌ ಕಳವು ಗೃಹ ಜ್ಯೋತಿಯಿಂದ ಕಡಿಮೆಯಾಗಿದೆ. ಕೈಗಾರಿಕಾ ವಿದ್ಯುತ್‌ ಕಳವು ಅತಿ ಕಡಿಮೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ.
  10. ಕಬ್ಬಿನ ಬೆಳೆಗೆ ನೀರು ಹಾಯಿಸಲು ಕೆಲವು ಜಿಲ್ಲೆಗಳಲ್ಲಿ ವಿದ್ಯುತ್‌ ಬೇಡಿಕೆ ಹೆಚ್ಚಾಗಿದೆ. ಇನ್ನು ಕೆಲವೇ ದಿನಗಳಲ್ಲಿ ಕಬ್ಬಿನ ಕಟಾವು, ಅರೆಯುವಿಕೆ ಪ್ರಾರಂಭವಾದ ಕೂಡಲೇ ಬೇಡಿಕೆ ಇಳಿಕೆಯಾಗಲಿದ್ದು, ಕಬ್ಬು ಅರೆಯುವಿಕೆಯೊಂದಿಗೆ ಕೊ-ಜೆನರೇಶನ್‌ ನಿಂದ ವಿದ್ಯುತ್‌ ಲಭ್ಯವಾಗುತ್ತದೆ ಎಂದು ಸಭೆಗೆ ವಿವರಿಸಲಾಯಿತು.
20231013 213821

ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಕೊಟ್ಟ ಮಾಹಿತಿ)

ಕಳೆದ 5 ವರ್ಷಗಳಲ್ಲಿ ಯಾವುದೇ ವಿದ್ಯುತ್ ಉತ್ಪಾದನಾ ಸಾಮರ್ಥ್ಯವು ಸೇರ್ಪಡೆಗೊಂಡಿಲ್ಲ

ವಿದ್ಯುತ್‌ ವ್ಯವಸ್ಥೆಯನ್ನು ರಚಿಸಲು ದೀರ್ಘಾವಧಿಯ ಅವಶ್ಯಕತೆಯಿರುವುದರಿಂದ ಯೋಜನೆಗಳನ್ನು ಸಮರ್ಪಕವಾಗಿ ರೂಪಿಸಬೇಕಾಗಿದೆ.

  1. ನವೀಕರಿಸಬಹುದಾದ ಇಂಧನದಲ್ಲಿ ಖಾಸಗಿ ವಲಯದಲ್ಲಿ ಸಹ ಯಾವುದೇ ಹೊಸ ವಿದ್ಯುತ್ ಖರೀದಿ ಒಪ್ಪಂದಗಳಗಾಗಿರುವುದಿಲ್ಲ.
  2. ಛತ್ತೀಸ್‌ಗಢ ಪಿಟ್ ಹೆಡ್ ಪವರ್ ಪ್ಲಾಂಟ್ – ಯಾವುದೇ ಪ್ರಗತಿಯನ್ನು ಮಾಡಲಾಗಿಲ್ಲ
  3. ಒರಿಸ್ಸಾದಲ್ಲಿರುವ ಮಂದಾಕಿನಿ Captive ಗಣಿಯಿಂದ ಕಲ್ಲಿದ್ದಲು ಪಡೆಯಲು ಯಾವುದೇ ಅನುಸರಣೆಯಾಗಿಲ್ಲ.
  4. KUSUM C ಅಡಿಯಲ್ಲಿ ಸೌರ ವಿಕೇಂದ್ರೀಕೃತ ಸ್ಥಾವರವನ್ನು 3,37,508 ಪಂಪ್‌ಸೆಟ್‌ಗಳಿಗೆ ಮಂಜೂರು ಮಾಡಲಾಗಿದೆ – ಆದರೆ ಅನುಷ್ಠಾನವಾಗಿರುವುದಿಲ್ಲ.
  5. 2020-21 ರಲ್ಲಿ ರಾಜ್ಯಕ್ಕೆ ಹಂಚಿಕೆಯಾಗಿದ್ದ 7000 ಸಂಖ್ಯೆಯ off grid/Stand-alone ಸೌರ ಪಂಪ್‌ ಗಳ ಅಳವಡಿಕೆಯಾಗಿರುವುದಿಲ್ಲ. ಇತರೆ ರಾಜ್ಯಗಳಿಗೆ 1 ಲಕ್ಷ ಪಂಪ್‌ ಗಳ ಹಂಚಿಕೆಯಾಗಿದೆ.
  6. ರಾಜ್ಯದ ಪಾಲಾದ 150 MW ವಿದ್ಯುತ್ತನ್ನು ನವದೆಹಲಿಗೆ ಹಂಚಿಕೆ ಮಾಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೇಡಿಕೆ 40-50% ಹೆಚ್ಚಾಗಿದೆ
  • ಮಳೆಯ ಕೊರತೆ
  • ಕೃಷಿ ಪಂಪ್‌ ಸೆಟ್‌ ಗಳ ಹೆಚ್ಚಿನ ವಿದ್ಯುತ್‌ ಬೇಡಿಕೆ
  • ಆರ್ಥಿಕತೆಯಲ್ಲಿ ಕೋವಿಡ್ ನಂತರದ ಪ್ರಬಲ ಚೇತರಿಕೆ.
  1. ದೈನಂದಿನ ಬಳಕೆಯು 180 ಮಿಲಿಯನ್‌ ಯೂನಿಟ್‌ ನಿಂದ 260 ಮಿಲಿಯನ್‌ ಯೂನಿಟ್‌ ಗಳಿಗೆ ಏರಿಕೆಯಾಗಿದೆ.
  2. ಗರಿಷ್ಠ ಹಗಲಿನ ವಿದ್ಯುತ್ ಬೇಡಿಕೆ 11000MW ನಿಂದ 16000MW ಗೆ ಏರಿಕೆಯಾಗಿದೆ (ಮಳೆಗಾಲದಲ್ಲಿ)
  3. ಜಲವಿದ್ಯುತ್ ಮತ್ತು ಪವನ ವಿದ್ಯುತ್‌ ಲಭ್ಯತೆಯಲ್ಲಿನ ಕೊರತೆಯಿಂದಾಗಿ, ರಾತ್ರಿಯ ವೇಳೆಯಲ್ಲಿ ಸುಮಾರು 10,000MW ವಿದ್ಯುತ್‌ ಕೊರತೆ ಎದುರಿಸಲಾಗುತ್ತಿದೆ.
  4. ವಿದ್ಯುತ್ ವಿನಿಮಯ ಕೇಂದ್ರಗಳಲ್ಲಿಯೂ ಸಹ ಹೆಚ್ಚಿನ ಬೇಡಿಕೆಯಿರುತ್ತದೆ – ಅದರ ಹೊರತಾಗಿಯೂ ರಾಜ್ಯದಿಂದ 1000 ರಿಂದ 1500MW ಖರೀದಿಸಲು ಪ್ರಯತ್ನಗಳು ನಡೆಯುತ್ತಿವೆ.

ರಾಜ್ಯ ವಲಯದಲ್ಲಿ ಹೆಚ್ಚಿನ ವಿದ್ಯುತ್ತನ್ನು ಉತ್ಪಾದಿಸುವ ಪ್ರಯತ್ನಗಳು

  1. ಜಲವಿದ್ಯುತ್‌ ಲಭ್ಯತೆಯಲ್ಲಿ 3000 MU ರಷ್ಟು ಕಡಿಮೆಯಾಗಿದೆ – ಪ್ರತಿ ದಿನಕ್ಕೆ ಸರಾಸರಿ 10MUs. ಜಲವಿದ್ಯುತ್ತನ್ನು ಗರಿಷ್ಠ ಬೇಡಿಕೆ ಪೂರೈಸಲು ಮತ್ತು ವಿದ್ಯುತ್‌ ಜಾಲದ ನಿರ್ವಹಣೆಗಾಗಿ ಮಾತ್ರ ಬಳಸಲಾಗುತ್ತಿದೆ.
  2. ಶಾಖೋತ್ಪನ್ನ ಘಟಕಗಳು
  • ಹಲವಾರು ಶಾಖೋತ್ಪನ್ನ ಘಟಕಗಳಿಗೆ AOH ಅನ್ನು ಮಳೆಗಾಲದಲ್ಲಿ ನಿಗದಿಪಡಿಸಲಾಗಿತ್ತು.
    ಹೆಚ್ಚಿನ ಬೇಡಿಕೆಯ ಕಾರಣದಿಂದ ಶಾಖೋತ್ಪನ್ನ ಘಟಕಗಳನ್ನು ಮರುಚಾಲನೆಗೊಳಿಸಲಾಗಿದೆ.
  • ನಾಗಪುರ / ರಾಮಗೊಂಡಂ ಪ್ರದೇಶದಲ್ಲಿ ಮಳೆಯಿಂದಾಗಿ ಕಲ್ಲಿದ್ದಲಿನ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿ, ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಸದರಿ ಸಮಸ್ಯೆಗಳ ಬಗ್ಗೆ ಕಲ್ಲಿದ್ದಲು ಮಂತ್ರಾಲಯದೊಂದಿಗೆ ವ್ಯವಹರಿಸಲಾಗಿದೆ.
  • ಅಸ್ತಿತ್ವದಲ್ಲಿರುವ ಎಲ್ಲಾ ಕಲ್ಲಿದ್ದಲು ಸಂಸ್ಥೆಗಳಿಂದ ತಿಂಗಳಿಗೆ 15 ಲಕ್ಷ MT ಪಡೆಯಲು ದಿನವಹಿ ಕ್ರಮವಹಿಸಲಾಗಿದೆ ಹಾಗೂ ನಿಗದಿಯಂತೆ ಪಡೆಯಲಾಗುತ್ತಿದ್ದು, ಪ್ರಸ್ತುತ ಕೊರತೆಯಿರುವುದಿಲ್ಲ
  • ನಿರಂತರ ಪರಿಶ್ರಮದಿಂದ ಸೆಪ್ಟೆಂಬರ್‌ ತಿಂಗಳಿನಲ್ಲಿ MCL – RSR ನಿಂದ 2 ಲಕ್ಷ MT ಹೆಚ್ಚುವರಿ ಕಲ್ಲಿದ್ದಲು ಪಡೆಯಲಾಗಿದೆ.
  • 2.5 ಲಕ್ಷ ಟನ್‌ ಆಮದು ಮಾಡಿದ ಕಲ್ಲಿದ್ದಲು ಪಡೆಯಲು ಟೆಂಡರ್‌ ಮಾಡಲಾಗಿದ್ದು ಮೌಲ್ಯಮಾಪನ ಮಾಡಲಾಗುತ್ತಿದೆ, ಆಮದು ಕಲ್ಲಿದ್ದಲಿನಲ್ಲಿ high Calorific Value ಇರುವುದರಿಂದ ವಿದ್ಯುತ್ ಉತ್ಪಾದನಾ ಸಾಮರ್ಥ್ಯವನ್ನು ವರ್ಧಿಸುತ್ತದೆ.
  • ಗುಣಮಟ್ಟವನ್ನು ಸುಧಾರಿಸಲು ತೊಳೆದ ಕಲ್ಲಿದ್ದಲನ್ನು ಪಡೆಯುವ ಪ್ರಸ್ತಾವನೆಯನ್ನು ಸಕ್ರಿಯವಾಗಿ ಪರಿಗಣಿಸಲಾಗುತ್ತಿದೆ.

ವಿನಿಮಯ / ದ್ವಿಪಕ್ಷೀಯ ವಿನಿಮಯದಿಂದ ವಿದ್ಯುತ್ತನ್ನು ಪಡೆಯುವುದು

  1. ವಿದ್ಯುತ್‌ ವಿನಿಮಯದಲ್ಲಿನ ವಿದ್ಯುತ್ ಲಭ್ಯತೆಯ ಮೇಲ್ವಿಚಾರಣೆಯನ್ನು ಪ್ರತಿ ಗಂಟೆಯ ಆಧಾರದಲ್ಲಿ ಕೈಗೊಳ್ಳಲಾಗುತ್ತಿದ್ದು, SLDC ಯ projections ಹಾಗೂ ಅವಶ್ಯಕತೆ ಅನುಗುಣವಾಗಿ ವಿದ್ಯುತ್‌ ಖರೀದಿಸಲು Bid ಗಳನ್ನು ಕರೆಯಲಾಗುತ್ತಿದೆ.
  2. ಉತ್ತರ ಪ್ರದೇಶ ಹಾಗೂ ಪಂಜಾಬ್‌ ರಾಜ್ಯಗಳೊಂದಿಗೆ bilateral power swapping ಆಧಾರದಲ್ಲಿ ವಿದ್ಯುತ್‌ ಪಡೆಯಲಾಗುತ್ತಿದೆ. – ಈಗ ಪಡೆಯುತ್ತಿರುವ ವಿದ್ಯುತ್ ಅನ್ನು ಮುಂದಿನ ಮುಂಗಾರು ಅವಧಿಗಳಲ್ಲಿ ಹಿಂತಿರುಗಿಸಲಾಗುವುದು.
  3. ಅಲ್ಪಾವಧಿ ಆಧಾರದಲ್ಲಿ 1300 MW ವಿದ್ಯುತ್ ಖರೀದಿ ಕೈಗೊಳ್ಳಲು KERC ರವರ ಅನುಮೋದನೆ ಪಡೆಯಲಾಗಿದ್ದು, ಟೆಂಡರ್‌ ಕರೆಯಲಾಗುತ್ತಿದೆ.
  4. ರಾಜ್ಯದಲ್ಲಿನ open access generators (ಶಾಖೋತ್ಪನ್ನ, ಸಹ-ವಿದ್ಯುತ್‌ ಮತ್ತು ನವೀಕರಿಸಬಹುದಾದ ಇಂಧನ ಮೂಲ) ಗಳಿಂದ ವಿದ್ಯುತ್ ಪಡೆಯಲು “ರಾಷ್ಟ್ರೀಯ ವಿಪತ್ತಿನ ಅಡಿಯಲ್ಲಿ” ವಿದ್ಯುತ್ ಕಾಯ್ದೆಯ ಸೆಕ್ಷನ್ 11 ಅನ್ನು ಜಾರಿಗೊಳಿಸಲಾಗುತ್ತಿದೆ. ಇದರಿಂದ ಸುಮಾರು 800 MW ವಿದ್ಯುತ್‌ ಸಿಗಲಿದೆ.
20231013 213838

ರಾಜ್ಯದಲ್ಲಿ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಬಲವರ್ಧನೆ

  1. KPCLನ 370MW ಅನಿಲ ವಿದ್ಯುತ್‌ ಉತ್ಪಾದನಾ ಘಟಕವನ್ನು (YCCP) ಕಾರ್ಯಾಚರಣೆಗೊಳಿಸಲು ಕ್ರಮ ವಹಿಸಲಾಗಿದೆ.
  2. ವಿಕೇಂದ್ರಿಕೃತ ಸೌರ ವಿದ್ಯುತ್ ಮೂಲಕ IP ಸೆಟ್‌ಗಳಿಗೆ ವಿದ್ಯುತ್‌ ಪೂರೈಸುವ ನಿಟ್ಟಿನಲ್ಲಿ KUSUM-C ಅಡಿಯಲ್ಲಿ ಮೊದಲ ಹಂತದಲ್ಲಿ 1300MW ಹಾಗೂ ಎರಡನೇ ಹಂತದಲ್ಲಿ 1200MW ಕೈಗೆತ್ತಿಕೊಳ್ಳಲಾಗುವುದು.
  3. ಪಾವಗಡದಲ್ಲಿ ಹೆಚ್ಚುವರಿಯಾಗಿ 300MW ಮತ್ತು ಕಲಬುರ್ಗಿಯಲ್ಲಿ 500MW ಸೋಲಾರ್ ಪಾರ್ಕ್ ಸ್ಥಾಪನೆ.
  4. ಶರಾವತಿಯಲ್ಲಿ 2000MW ಪಂಪ್ಡ್ ಹೈಡ್ರೋ ಪ್ಲಾಂಟ್ ಕೈಗೆತ್ತಿಕೊಳ್ಳಲಾಗುತ್ತಿದೆ –ಇದಕ್ಕೆ ಬೇಕಾದ CEA, CWC ಮತ್ತು MOEFCC ಅನುಮೋದನೆಗಳ ಬಗ್ಗೆ ಶೀಘ್ರವಾಗಿ ಕ್ರಮವಹಿಸಲಾಗುತ್ತಿದ್ದು, ಡಿಸೆಂಬರ್-2023‌ ರೊಳಗೆ ಪಡೆಯಲಾಗುವುದು.
  5. ಛತ್ತೀಸ್‌ಗಢದ ಗೋದ್ನಾದಲ್ಲಿ ರಾಜ್ಯದ ಕ್ಯಾಪ್ಟಿವ್ ಕಲ್ಲಿದ್ದಲು ಗಣಿಯನ್ನು ಖಾಸಗಿ ಹೂಡಿಕೆ / ಜಂಟಿ ಹೂಡಿಕೆಯಡಿ ಕೈಗೊಳ್ಳಲು ಕ್ರಮವಹಿಸಲಾಗುತ್ತಿದೆ.
  6. ಇತರ ರಾಜ್ಯಗಳಲ್ಲಿನ stressed out ವಿದ್ಯುತ್ ಸ್ಥಾವರಗಳಿಂದ ವಿದ್ಯುತ್ ಖರೀದಿಸಲು ಪ್ರಸ್ತಾಪಿಸಲಾಗಿದೆ. ವಿದ್ಯುತ್ ಸರಬರಾಜು / ವಿದ್ಯುತ್‌ ವಿತರಣೆಯ ಮೇಲ್ವಿಚಾರಣೆ
  7. ವಿದ್ಯುತ್ ಪೂರೈಕೆಯ ದೈನಂದಿನ ಮೇಲ್ವಿಚಾರಣೆಯನ್ನು ಅಪರ ಮುಖ್ಯ ಕಾರ್ಯದರ್ಶಿ, ಇಂಧನ ಇಲಾಖೆ ಹಾಗೂ ವ್ಯವಸ್ಥಾಪಕ ನಿರ್ದೇಶಕರು KPTCL ರವರ ನೇತೃತ್ವದಲ್ಲಿ ನಿರ್ವಹಿಸಲಾಗುತ್ತಿದೆ.
  8. ಪ್ರತಿ ಜಿಲ್ಲೆಯಲ್ಲಿ ಉಪಕೇಂದ್ರವಾರು ಮತ್ತು ಫೀಡರ್‌ವಾರು ವಿದ್ಯುತ್‌ ಪೂರೈಕೆ ಬಗ್ಗೆ ಮೇಲ್ವಿಚಾರಣೆ ನಡೆಸಲು KPTCL / ESCOM ಗಳ ಮುಖ್ಯ ಇಂಜಿನಿಯರ್‌ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಲಾಗಿದೆ.
  9. ವಿದ್ಯುತ್‌ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರುಗಳು, ಎಲ್ಲಾ ಭಾಗೀದಾರರೊಂದಿಗೆ ಸಮರ್ಪಕ ರೀತಿಯಲ್ಲಿ ಸಂವಹನವನ್ನು ಮತ್ತು ವಿದ್ಯುತ್‌ ಪೂರೈಕೆಯ ಸಮಾನತೆಯನ್ನು ಖಚಿತಪಡಿಸಿಕೊಳ್ಳಲು ಕಾರ್ಯನಿರ್ವಹಿಸುತ್ತಿದ್ದಾರೆ.

ಸಭೆಯಲ್ಲಿ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ವಿದ್ಯುತ್‌ ಉತ್ಪಾದನೆ, ಪ್ರಸರಣೆ ಮತ್ತು ವಿತರಣೆಗೆ ಸಂಬಂಧಿಸಿದ ಸಂಸ್ಥೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.