IMG 20231213 WA0009

ಪಾವಗಡ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಸಾರಥಿಗಳ ಆಯ್ಕೆ…!

DISTRICT NEWS ತುಮಕೂರು

ಸಹಕಾರ ಸಂಘಕ್ಕೆ ಅಧ್ಯಕ್ಷ ,ಉಪಾಧ್ಯಕ್ಷರ ಆಯ್ಕೆ

ಪಾವಗಡ : ತಾಲ್ಲೂಕಿನ ವೈ. ಎನ್ .ಹೊಸಕೋಟೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ
ಈ ಹಿಂದೆ ಅಧ್ಯಕ್ಷರಾಗಿದ್ದ ರಾಮಾಂಜಿನಪ್ಪ ಮತ್ತು ಉಪಾಧ್ಯಕ್ಷರಾಗಿದ್ದ ಗೋಪಾಲಪ್ಪ ನವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಗಳಿಗೆ ಬುಧವಾರ ಅಧ್ಯಕ್ಷ ಸ್ಥಾನಕ್ಕೆ ಕೊನೇರಪ್ಪ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಮಾತ್ರ ಅರ್ಜಿ ಸಲ್ಲಿಸಿದ್ದು. ಇತರೆಯವರು ಅರ್ಜಿ ಸಲ್ಲಿಸಿದ ಕಾರಣ ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ
ಸಿಡಿಒ ಗುರುರಾಜ್, ಅಧ್ಯಕ್ಷರಾಗಿ ಕೊನೇರಪ್ಪ, ಉಪಾಧ್ಯಕ್ಷರಾಗಿ ರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಿದರು.

ನೂತನ ಅಧ್ಯಕ್ಷ ಕೊನೇರಪ್ಪ ಮಾತನಾಡಿ, ಸಹಕಾರಿ ಸಂಘಗಳು ರೈತರಿಗೆ ಸಹಾಯಕವಾಗಲಿದ್ದು, ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ರೈತರಿಗೆ ಮುಟ್ಟಿಸುವ ಮೂಲಕ ರೈತರ ಏಳಿಗೆಗೆ, ಸಹಕಾರಿ ಸಂಘದ ಅಭಿವೃದ್ಧಿಗೆ ಶ್ರಮಿಸಲಾಗುತ್ತದೆ. ಸಂಘದ ಎಲ್ಲ ಸದಸ್ಯರು ಸಹಕರಿಸಬೇಕು ಎಂದರು.

ನಂತರ ಸಹಕಾರಿ ಸಂಘದ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸದಸ್ಯರಾದ ಶಿವಾನಂದ ರೆಡ್ಡಿ, ಶಂಶುದ್ದೀನ್, ವೆಂಕಟೇಶಪ್ಪ, ಕಾರ್ಯದರ್ಶಿ ಸೋಮೇಶ್, ಮುಖಂಡರಾದ ಎಸ್ ಟಿ ನಾಗರಾಜ್, ಆನಂದಪ್ಪ, ಹಾಗೂ ರೈತರು ಹಾಜರಿದ್ದರು.

ವರದಿ. ಶ್ರೀನಿವಾಸಲು.ಎ