IMG 20240127 WA0008

ಪಾವಗಡ : ಸಂವಿಧಾನದಲ್ಲಿ ಎಲ್ಲರೂ ಸಮಾನರು….!.

DISTRICT NEWS ತುಮಕೂರು

ಸಂವಿಧಾನದಲ್ಲಿ ಎಲ್ಲರೂ ಸಮಾನರು.

ಪಾವಗಡ : ಸಂವಿಧಾನ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಿದೆ, ಸಂವಿಧಾನದಲ್ಲಿ ಎಲ್ಲರೂ ಸಮಾನರು ಎಂದು ನಿವೃತ್ತ ಮುಖ್ಯ ಶಿಕ್ಷಕ ವಡಸಲ್ಲಪ್ಪ ತಿಳಿಸಿದರು.

ಪಟ್ಟಣದ ಜೈ ಗುರುದೇವ ಆಂಗ್ಲಶಾಲೆಯಲ್ಲಿ ಏರ್ಪಡಿಸಿದ್ದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶ ನನಗೇನು ಮಾಡಿದೆ ಎನ್ನುವುದಕ್ಕಿಂತ, ದೇಶಕ್ಕಾಗಿ ನಾನೇನು ಮಾಡಬೇಕು ಎಂಬುದು ಪ್ರತಿಯೊಬ್ಬರು ತಿಳಿಯಬೇಕೆಂದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎಂಬಂತೆ.
ಸದೃಢ ದೇಶ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಶ್ಲಾಘನೀಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ವಿವಿಧ ತರಗತಿಯಿಂದ ವಿದ್ಯಾರ್ಥಿಗಳು ಕನ್ನಡ ಹಿಂದಿ ಇಂಗ್ಲಿಷ್ ಭಾಷೆಯಲ್ಲಿ ಭಾಷಣ ಮಾಡಿದರು.

ಇನ್ನು ಕೆಲ ವಿದ್ಯಾರ್ಥಿಗಳು ದೇಶಭಕ್ತಿ ಭಕ್ತಿ ಗೀತೆಗಳ ಹಾಡುಗಳಿಗೆ ನೃತ್ಯ ಮಾಡಿ ಮನರಂಜಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ಮಂಜುಳಾ, ಸಹ ಶಿಕ್ಷಕಿಯರಾದ ಉಷಾ, ಪುಷ್ಪ, ಅಖಿಲ, ರೇಷ್ಮಾ, ಶಹತಾಜ್, ನಾಗಮಣಿ, ಗೌಸಿಯ, ತೇಜ,
ಪೋಷಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು.