IMG 20200817 WA0070

ಜೆಸಿಬಿ- ದ್ವಿಚಕ್ರ ವಾಹನ ಡಿಕ್ಕಿ, ಬೈಕ್ ಸಾವರ ಸಾವು

ತುಮಕೂರು DISTRICT NEWS

ಜೆಸಿಬಿ- ದ್ವಿಚಕ್ರ ವಾಹನ ಡಿಕ್ಕಿ, ಬೈಕ್ ಸಾವರ ಸಾವು

ಪಾವಗಡ:  ಜೆಸಿಬಿ ಯಂತ್ರ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಾವಗಡ ತಾಲ್ಲೂಕಿನ ಮಂಗಳವಾಡ ಹಾಗೂ ಅರಸೀಕೆರೆ ಮಾರ್ಗದ ನಡುವೆ ಸೋಮವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ

ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯನ್ನ ತಾಲ್ಲೂಕಿನ ವೀರ ಹನುಮಕ್ಕನಪಾಳ್ಯದ ಸುಮಾರು ನಲವತ್ತು ವರ್ಷದ ನಾಗರಾಜು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಘಟನೆ ವಿವರ

ಅರಸೀಕೆರೆ ಮಾರ್ಗದಿಂದ ಬರುತ್ತಿದ್ದ ಜೆಸಿಬಿಗೆ ಮಂಗಳವಾಡ ಭಾಗದಿಂದ ಅರಸೀಕೆರೆ ಮಾರ್ಗವಾಗಿ ತೆರಳುತ್ತಿದ್ದ ಬೈಕ್ನ ನಡುವೆ ಡಿಕ್ಕಿ ಸಂಭವಿಸಿ ವ್ಯಕ್ತಿವೋರ್ವ ಸಾವನ್ನಪ್ಪಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

ಭಜಂತ್ರಿ ಸಮಾಜದಲ್ಲಿ ಜನಿಸಿದ್ದ ನಾಗರಾಜು ಕುಲ ಕಸುಬು ಮಾಡಿಕೊಂಡು ಬದುಕುತ್ತಿದ್ದರು.ವಿಧಿ ಲಿಖಿತ ಇಂದು ಮಡದಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.  ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಅರಸೀಕೆರೆ ಸಬ್ ಇನ್ಸ್ಪೆಕ್ಟರ್ ಶ್ರೀನಿವಾಸ್, ಮುಖ್ಯಪೇದೆ ಸಿದ್ದೇಶ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಪಾವಗಡ ಸರ್ಕಾರಿ ಆಸ್ಪತ್ರೆಗೆ ಕಳುಹಿಸಿ ನಂತರ ಪ್ರಥಮ ಮಾಹಿತಿಯನ್ನು ದಾಖಲು ಮಾಡಿಕೊಂಡಿದ್ದಾರೆ.

ವರದಿ: ನವೀನ್ ಕಿಲಾರ್ಲಹಳ್ಳಿ