20240810 220318

BJP : ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ….!

POLATICAL STATE

ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ

ಲೂಟಿ ಒಪ್ಪಿಕೊಂಡು ರಾಜೀನಾಮೆ ಕೊಡಿ: ವಿಜಯೇಂದ್ರ

ಬೆAಗಳೂರು: ಯಡಿಯೂರಪ್ಪನವರ ಬಗ್ಗೆ ಹಗುರವಾಗಿ ಮಾತನಾಡುವುದನ್ನು ಬಿಡಿ. ಮುಖ್ಯಮಂತ್ರಿಗಳೇ ನಿಮ್ಮ ಕುರ್ಚಿ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸವಾಲು ಹಾಕಿದರು.
ಕಾಂಗ್ರೆಸ್ ಸರಕಾರದ ಹಗರಣಗಳನ್ನು ಖಂಡಿಸಿ ಬಿಜೆಪಿ- ಜೆಡಿಎಸ್ ವತಿಯಿಂದ ನಡೆದ ಮೈಸೂರು ಚಲೋ ಪಾದಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಇಂದು ಅವರು ಮಾತನಾಡಿದರು. ಯಡಿಯೂರಪ್ಪನವರ ರಾಜಕೀಯ ನಿವೃತ್ತಿಯ ಮಾತನ್ನು ಹಿಂದಕ್ಕೆ ಪಡೆಯಿರಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿಗಳೇ, ಸಾವಿರಾರು ಕೋಟಿ ಲೂಟಿ ಬಗ್ಗೆ ಒಪ್ಪಿಕೊಂಡು ರಾಜೀನಾಮೆ ಕೊಡಿ ಎಂದು ಒತ್ತಾಯಿಸಿದರು.
ಮುಡಾ ಹಗರಣದಲ್ಲಿ 5 ಸಾವಿರ ಕೋಟಿಯ ಅವ್ಯವಹಾರ ಆಗದೆ ಇದ್ದರೆ ನೀವ್ಯಾಕೆ ಸದನದಿಂದ ಓಡಿಹೋಗಿದ್ದೀರಿ? ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ವಿಪಕ್ಷಕ್ಕೆ ಗೊಡ್ಡು ಬೆದರಿಕೆ ಹಾಕಿದ್ದು ಯಾಕೆ? ಹಗರಣಗಳ ಕುರಿತು ಆರೋಪಿಸುವ ಮೊದಲು ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣದ ವಿವರ ಕೊಡಿ ಎಂದು ಒತ್ತಾಯಿಸಿದರು. ಯಡಿಯೂರಪ್ಪ ಅವರನ್ನು ಕಂಡರೆ ಇನ್ನೂ ನಿಮಗೆ ಭಯವೇ ಎಂದು ಪ್ರಶ್ನಿಸಿದರು. ಯಡಿಯೂರಪ್ಪ ಅವರ ಸಿಎಜಿ ಸಂಬAಧ ಎಫ್‌ಐಆರ್, ಕುತಂತ್ರ ಮಾಡಿದ್ದನ್ನು ಪ್ರಸ್ತಾಪಿಸಿದರು.
ಸಿದ್ದರಾಮಯ್ಯನವರ ವಿರುದ್ಧ ಈ ಹೋರಾಟವಲ್ಲ; ಭ್ರಷ್ಟ ಮುಖ್ಯಮಂತ್ರಿಗಳ ವಿರುದ್ಧ ನಮ್ಮ ಹೋರಾಟ ಎಂದರಲ್ಲದೆ, ಭ್ರಷ್ಟಾಚಾರ, ಸ್ವಜನ ಪಕ್ಷಪಾತದ ಕಾಂಗ್ರೆಸ್ ಸರಕಾರದ ವಿರುದ್ಧ ಹೋರಾಟ ನಮ್ಮದು ಎಂದು ತಿಳಿಸಿದರು. ನಿಂಗ ಅವರ ಜಮೀನು ಅಕ್ರಮ ಖರೀದಿ, ಅದನ್ನು ಸಿದ್ದರಾಮಯ್ಯನವರ ಶ್ರೀಮತಿಗೆ ನೀಡಿದ್ದನ್ನು ಪ್ರಸ್ತಾಪಿಸಿದರು.

20240810 220333

ನಮ್ಮ ಹೋರಾಟ ನಿರಂತರವಾಗಿರಲಿದೆ. ನಮ್ಮ ಹೋರಾಟವನ್ನು ಯಾರೂ ಹತ್ತಿಕ್ಕಲು ಅಸಾಧ್ಯ ಎಂದು ಅವರು ಪ್ರಕಟಿಸಿದರು. ಪಾದಯಾತ್ರೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೆಸೆಯುವವರೆಗೆ ಹೋರಾಟ ಮುಂದುವರೆಯುತ್ತದೆ ಎಂದು ತಿಳಿಸಿದರು.

ಬಡವರು, ರೈತರನ್ನು ಕಾಪಾಡುವ ಇಚ್ಛಾಶಕ್ತಿ ನಿಮ್ಮಲ್ಲಿಲ್ಲ. ನಮ್ಮ ಬಿಜೆಪಿ ಸರಕಾರ ಮನೆ ಬಿದ್ದ ಸಂದರ್ಭದಲ್ಲಿ 5 ಲಕ್ಷ ಕೊಟ್ಟಿತ್ತು. ಈ ಸರಕಾರ 1 ಲಕ್ಷ ಕೊಡುವುದಾಗಿ ಘೋಷಿಸಿದೆ. ಆದರೆ, ಅದನ್ನೂ ಕೊಟ್ಟಿಲ್ಲ. ಅಂಗನವಾಡಿ ಕಾರ್ಯಕರ್ತರಿಗೆ 2 ತಿಂಗಳಿAದ ಗೌರವಧನ ಸಿಕ್ಕಿಲ್ಲ. ಅಂಗವಿಕಲರಿಗೆ 6 ತಿಂಗಳಿAದ ಮಾಸಾಶನ ಕೊಟ್ಟಿಲ್ಲ ಎಂದು ಟೀಕಿಸಿದರು.15 ತಿಂಗಳುಗಳಲ್ಲಿ ಯಾವುದೇ ಹೊಸ ಅಭಿವೃದ್ಧಿ ಯೋಜನೆಯನ್ನು ಘೋಷಿಸಿಲ್ಲ. ದರಿದ್ರ ಕಾಂಗ್ರೆಸ್ ಸರಕಾರ ಬಂದ ಬಳಿಕ, ಒಂದೆಡೆ ಭೀಕರ ಬರಗಾಲ; 1500 ರೈತರ ಆತ್ಮಹತ್ಯೆ ಮಾಡಿಕೊಂಡರಲ್ಲವೇ? ಇದೇನಾ ನಿಮ್ಮ ರೋಲ್ ಮಾಡೆಲ್ ಸರಕಾರ ಎಂದು ಪ್ರಶ್ನಿಸಿದರು. ವಿಪಕ್ಷವಾಗಿ ಸವಾಲು ಹಾಕಿದರೆ ನಮಗೇ ಧಮ್ಕಿ ಹಾಕುತ್ತೀರಾ? ಎಂದರಲ್ಲದೆ, ಚಮಚಾಗಿರಿ ಮಾಡುವ ವಿಪಕ್ಷ ನಮ್ಮದಲ್ಲ ಎಂದು ತಿಳಿಸಿದರು.

ಸಿದ್ದರಾಮಯ್ಯನವರ ಸಮಾಜವಾದಿ ಮುಖವಾಡ ಕಳಚಿಬಿದ್ದಿದೆ. ಪೊಲೀಸರನ್ನು ಉಪಯೋಗಿಸಿ ನಮ್ಮ ಹೋರಾಟ ಹತ್ತಿಕ್ಕುವ ಕೆಲಸ ಮಾಡಿದ್ದೀರಿ. ಅಧಿವೇಶನದಲ್ಲಿ ವಾಲ್ಮೀಕಿ ನಿಗಮದ ಹಗರಣ, ಮೂಡದ ಹಗರಣ ಕುರಿತು ಚರ್ಚಿಸಲು ಮುಂದಾದರೆ, ನಿಲುವಳಿ ಸೂಚನೆ ಮಂಡಿಸಿದರೆ, ವಿಪಕ್ಷದ ಕಿವಿಗೆ ಹೂ ಮುಡಿಸುವ ಕೆಲಸ ಮಾಡಿದರು ಎಂದು ಆಕ್ಷೇಪಿಸಿದರು.
ಅಧಿವೇಶನದಲ್ಲಿ ಉತ್ತರ ಕೊಡಲಾಗದೆ ಓಡಿ ಹೋದ ರಣಹೇಡಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಂದು ಟೀಕಿಸಿದರು. ಇದನ್ನು ನಾನು ಹೇಳುತ್ತಿಲ್ಲ; ರಾಜ್ಯದ ಜನತೆ ಹೇಳುತ್ತಾರೆ ಎಂದರು.
ಇದೇ 3ರಿಂದ ಆರಂಭವಾದ ಮೈಸೂರು ಚಲೋ ಪಾದಯಾತ್ರೆ ಯಶಸ್ವಿಯಾಗಿದೆ. ಭ್ರಷ್ಟಾಚಾರರಹಿತ ಸರಕಾರ, ಅಹಿಂದ ಸಮುದಾಯಕ್ಕೆ ಸೌಕರ್ಯ ಕೊಡುವ ಭರವಸೆ ನೀಡಿ ಸಿದ್ದರಾಮಯ್ಯನವರ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಪಕ್ಷÀವು ಅಭಿವೃದ್ಧಿರಹಿತ, ಭ್ರಷ್ಟಾಚಾರಸಹಿತ ಸರಕಾರವನ್ನು ನೀಡಿದೆ ಎಂದು ಆಕ್ಷೇಪಿಸಿದರು.
ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ – ಯಡಿಯೂರಪ್ಪ

ಮಾಜಿ ಸಿಎಂ, ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ನಿಮ್ಮಲ್ಲಿ ತಾಕತ್ತಿದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಬನ್ನಿ ಎಂದು ಆಗ್ರಹಿಸಿದರು. ಆಗ ರಾಜ್ಯದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸದಿಂದ ನುಡಿದರು.
ಸಿದ್ದರಾಮಯ್ಯನವರೇ ನನ್ನ ಬದುಕಿನ ಕೊನೆಯ ಉಸಿರು ಇರುವವರೆಗೂ ರಾಜಕೀಯದಲ್ಲಿದ್ದು, ನಿಮ್ಮನ್ನು ಮನೆಗೆ ಕಳಿಸುವೆ ಎಂದು ಸವಾಲು ಹಾಕಿದರು. ಈ ಸರಕಾರ ದಿವಾಳಿ ಆಗಿದೆ. ದಿವಾಳಿ ಸ್ಥಿತಿಯಲ್ಲಿರುವ ನೀವು ಮನ ಬಂದAತೆ ಮಾತನಾಡುತ್ತೀರಿ ಎಂದು ಟೀಕಿಸಿದರು.
ಡಿ.ಕೆ.ಶಿವಕುಮಾರ್ ಅವರ ಹಗುರ ಮಾತನ್ನು ಆಕ್ಷೇಪಿಸಿದರು. .ಶಿವಕುಮಾರ್ ಅವರ ಪಾಪದ ಕೊಡ ತುಂಬುತ್ತಿದೆ. ನೀವು ನಿಮ್ಮ ಭವಿಷ್ಯದ ಬಗ್ಗೆ ಯೋಚಿಸಿ ಎಂದು ಸವಾಲೆಸೆದರು. ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ. ನೀರಾವರಿ ಯೋಜನೆ ಸ್ಥಗಿತವಾಗಿದೆ ಎಂದು ತಿಳಿಸಿದರು. ಲೂಟಿ, ಹಗಲುದರೋಡೆಯ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಲ್ಲಿದ್ದಾರೆ ಎಂದರು. ಸರಕಾರದ ಹಗರಣಗಳ ಕುರಿತ ಪುಸ್ತಕವನ್ನೂ ಅವರು ಬಿಡುಗಡೆಗೊಳಿಸಿದರು.

20240810 220326
ಕೇಂದ್ರ ಸಚಿವ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಮಾತನಾಡಿ, ಸಿದ್ದರಾಮಯ್ಯನವರ ಪರ ಬಂಡೆ ಥರ ಇದ್ದೇನೆ ಎಂದು ಶಿವಕುಮಾರ್ ಹೇಳಿದ್ದಾರೆ. ಆ ಬಂಡೆಯನ್ನು ನಂಬಿ ನಾನು ಕೆಟ್ಟಿದ್ದೆ ಎಂದು ತಿಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನ ಪಡೆದ ಕಾಂಗ್ರೆಸ್ ಲೋಕಸಭಾ ಚುನಾವಣೆಯಲ್ಲಿ 8 ಸ್ಥಾನ ಪಡೆದುದು ಯಾಕೆ ಎಂದು ಪ್ರಶ್ನಿಸಿದರು. ಆದರೆ, 9ನೇ ಸ್ಥಾನ ಹೇಗೆ ಬಂತೆAದು ಗೊತ್ತಿದೆ ಎಂದು ನುಡಿದರು.
ಕುಮಾರಸ್ವಾಮಿಯವರ ಸೂಚನೆಯಂತೆ ವಿಸಿಪಿ ಮತ್ತು ಟಿವಿ ಮೂಲಕ ಡಿ.ಕೆ.ಶಿವಕುಮಾರ್ ಬಿಎಫ್, ಗಿಎಫ್ ಮೂಲಕ ಹಣ ಮಾಡಿದ್ದನ್ನು ತಿಳಿಸುವ ವಿಡಿಯೋವನ್ನು ಜನರ ಮುಂದಿಡಲಾಯಿತು. ಡಿ.ಕೆ.ಶಿವಕುಮಾರ್, ಕೊತ್ವಾಲ್ ರಾಮಚಂದ್ರನ ಕೈಕಾಲು ಒತ್ತಿದ್ದ ಕುರಿತ ಮಾಹಿತಿಯ ವಿಡಿಯೋವನ್ನೂ ಪ್ರದರ್ಶಿಸಲಾಯಿತು. ತಿಹಾರ್ ಜೈಲು ಸೇರಿದ ಡಿಕೆಶಿ ಕುರಿತ ವಿವರವನ್ನು ವಿಡಿಯೋ ಮೂಲಕ ಜನರ ಮುಂದಿಡಲಾಯಿತು. ದಲಿತ ಕುಟುಂಬದ ಮೇಲೆ ದೌರ್ಜನ್ಯ ಮಾಡಿದ ವಿವರವನ್ನೂ ನೀಡಲಾಯಿತು. ಕಾಂಗ್ರೆಸ್ ಭ್ರಷ್ಟಾಚಾರದ ಕುರಿತ ಅದೇ ಪಕ್ಷದ ಜನಾರ್ದನ ಪೂಜಾರಿ, ಮಾರ್ಗರೆಟ್ ಆಳ್ವ, ಬಿ.ಕೆ.ಹರಿಪ್ರಸಾದ್, ರಮೇಶ್‌ಕುಮಾರ್ ಮೊದಲಾದ ಮುಖಂಡರು ಮಾತನಾಡಿದ ವಿಡಿಯೋಗಳನ್ನು ಪ್ರದರ್ಶಿಸಲಾಯಿತು.
ವಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಉಸ್ತುವಾರಿ ರಾಧಮೋಹನ್‌ದಾಸ್ ಅಗ್ರವಾಲ್, ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ, ಕು. ಶೋಭಾ ಕರಂದ್ಲಾಜೆ, ವಿ. ಸೋಮಣ್ಣ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಎರಡೂ ಪಕ್ಷಗಳ ಪ್ರಮುಖರಾದ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದಗೌಡ, ಬಸವರಾಜ್ ಬೊಮ್ಮಾಯಿ, ಹೆಚ್.ವಿಶ್ವನಾಥ್, ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛÀಲವಾದಿ ನಾರಾಯಣಸ್ವಾಮಿ, ನಿಕಪೂರ್ವ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಡಾ.ಸಿ.ಎನ್. ಅಶ್ವಥ್‌ನಾರಾಯಣ್, ಎನ್. ಮಹೇಶ್, ಸಿ.ಸಿ. ಪಾಟೀಲ್, ಅರವಿಂದ್ ಬೆಲ್ಲದ, ಶ್ರೀಮತಿ ಶಶಿಕಲಾ ಜೊಲ್ಲೆ, ಸಿ.ಟಿ. ರವಿ, ಬಿ. ಶ್ರೀರಾಮುಲು, ಭೈರತಿ ಬಸವರಾಜ್, ಎನ್. ನಾಗರಾಜ್ (ಎಂ.ಟಿ.ಬಿ.), ಟಿ.ಎಸ್. ಶ್ರೀವತ್ಸ, ಹೇಮಲತಾ ನಾಯಕ್, ನಿರ್ಮಲ್ ಕುಮಾರ್ ಸುರಾಣ, ಯದುವೀರ್ ಕೃಷ್ಣದತ್ತ ಒಡೆಯರ್, ಕೋಟ ಶ್ರೀನಿವಾಸ್ ಪೂಜಾರಿ, ವಿ. ಸುನೀಲ್ ಕುಮಾರ್, ಸುನಿಲ್ ವಲ್ಯಾಪುರೆ, ಸಾ.ರಾ. ಮಹೇಶ್, ಸುರೇಶ್ ಬಾಬು ಸಿ.ಬಿ., ಬಂಡೆಪ್ಪ ಕಾಶೆಂಪುರ್, ವೆಂಕಟರಾವ್ ನಾಡಗೌಡ, ಕೆ.ಟಿ. ಶ್ರೀಕಾಂತೇಗೌಡ, ಸಿ.ಎಸ್. ಪುಟ್ಟರಾಜು, ಎಸ್.ಎಲ್. ಬೋಜೆಗೌಡ, ಕೆ.ಎ. ತಿಪ್ಪೇಸ್ವಾಮಿ, ಜಿ.ಟಿ. ದೇವೆಗೌಡ, ಶ್ರೀಮತಿ ಶಾರದಾ ಪರ‍್ಯನಾಯ್ಕ, ಟಿ.ಎ. ಶರವಣ, ಕೆ. ಅನ್ನದಾನಿ, ಮೊದಲಾದವರು ವೇದಿಕೆಯಲ್ಲಿದ್ದರು.
ಜನಪ್ರತಿನಿಧಿಗಳು, ಮಾಜಿ ಜನಪ್ರತಿನಿಧಿಗಳು, ಎರಡೂ ಪಕ್ಷದ ಪದಾಧಿಕಾರಿಗಳು, ಬೃಹತ್ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿದ್ದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕರ್ತರು ಬಂದ ಬಸ್ಸುಗಳನ್ನು ಪೊಲೀಸರು ತಡೆದಿರುವುದನ್ನು ಗಮನಕ್ಕೆ ತಂದರು. ಜನರು ಸಭಾಸ್ಥಳಕ್ಕೆ ಬಾರದಂತೆ ತಡೆಯದಿರಲು ವಿನಂತಿಸಿದರು.