* ಮೈಕ್ರೋ ಫೈನಾನ್ಸ್ ಕಂಪೆನಿಗಳು – ಮೀಟರ್ ಬಡ್ಡಿ ದಂಧೆ
ಬೆಂಗಳೂರು : ಮೈಕ್ರೋ ಫೈನಾನ್ಸ್ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025″ ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ.
ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ.
ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ ಎಂಬ ಭರವಸೆ ನನಗಿದೆ. ಮುಖ್ಯಮಂತ್ರಿ – ಸಿದ್ದರಾಮಯ್ಯ.
https://x.com/CMofKarnataka/status/1889716420407103918?t=1POsCB3nCK1A1s5zXTu88g&s=19