ಪರಿಸರದ ಬಗ್ಗೆ ಕಾಳಜಿ ಇರಬೇಕು.ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್
ಪಾವಗಡ: ಬಿಸಿಲಿನ ತಾಪ ಹೆಚ್ಚಿರುವಾಗ ಮರವನ್ನು ಹುಡುಕಾಡುವ ಬದಲು ಪ್ರತಿಯೊಬ್ಬರೂ ಗಿಡವನ್ನು ನೆಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶ ವಿ. ಮಾದೇಶ್ ತಿಳಿಸಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಗುರುವಾರ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಮತ್ತು ಅರಣ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ
ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಕಡೆಯಲಾಗುವುದೆಂದು, ಮರಗಳಿಲ್ಲದಿದ್ದರೆ ಉತ್ತಮ ಆಮ್ಲಜನಕ ದೊರೆಯಲು ಹೇಗೆ ಸಾಧ್ಯವೆಂದರು. ಅರಣ್ಯ ಇಲಾಖೆಯಿಂದ ರೈತರಿಗೆ ಗಿಡಗಳನ್ನು ಬೆಳೆಸಲು ಪ್ರೋತ್ಸಾಹ ಧನ ನೀಡುತ್ತಿದ್ದರೂ ಸಹ ಸಂಪೂರ್ಣವಾಗಿ ಕಾರ್ಯಗತವಾಗುತ್ತಿಲ್ಲ ವೆಂದರು. ಮರಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವೆಂದು, ಕರೋನ ಸಂಕಷ್ಟಕಾಲದಲ್ಲಿ ಆಮ್ಲಜನಕದ ಪ್ರಾಮುಖ್ಯತೆಯ ಅರಿವು ನಮಗಿದೆ ಎಂದರು.
ಕಾರ್ಯಕ್ರಮ ಉದ್ದೇಶಿಸಿ ವಲಯ ಅರಣ್ಯ ಅಧಿಕಾರಿ ರಾಕೇಶ್ ಮಾತನಾಡಿ, ಇಂದು ಸಂಕೇತವಾಗಿ ಪರಿಸರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ ಎಂದು ತಾಲೂಕಿನಲ್ಲಿ ಮಳೆಯ ಅಭಾವವಿದ್ದು, ಮಳೆ ಬಂದಾಗ ಸಸಿಗಳನ್ನು ನೆಡಲು ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಳ್ಳಲಾಗಿದೆ ಎಂದರು.
ವಕೀಲ ಸಂಘದ ಅಧ್ಯಕ್ಷ ಶೇಷ ನಂದನ್ ಮಾತನಾಡಿ,
ಮನುಷ್ಯನ ಉಳಿವಿಗೆ ಅಗತ್ಯವಾಗಿರುವ ಪರಿಸರ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ ಉತ್ತಮ ಆರೋಗ್ಯ ಹೊಂದಲು ನಮ್ಮ ಸುತ್ತಮುತ್ತ ಸ್ವಚ್ಛ, ಸುಂದರ ಪರಿಸರ ಇರುವುದು ಅತ್ಯಗತ್ಯ. ಪ್ರತಿಯೊಬ್ಬರು ಕನಿಷ್ಠ ಮನೆಗೊಂದು ಸಸಿ ನೆಡಬೇಕು, ಮುಂದಿನ ತಲೆಮಾರಿನವರಿಗೆ ಅನುಕೂಲ ವಾಗುವಂತೆ ಗಿಡಗಳನ್ನು ನೆಡಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಬಿ. ಪ್ರಿಯಾಂಕಾ, ಅಧಿಕ್ ಸಿವಿಲ್ ನ್ಯಾಯಾಧೀಶರಾದ
ಸಿ. ಮುನಿರತ್ನಮ್ಮ, ವಕೀಲ ಸಂಘದ ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಸಹಾಯಕ ಸರ್ಕಾರಿ ಅಭಿಯೋಜಕ ಸಣ್ಣೀರಪ್ಪ,ಜಿ.ಹೆಚ್.,
ಅರಣ್ಯ ಅಧಿಕಾರಿ ರಾಜಶೇಖರ್ ಮುಂತಾದವರು ಪಾಲ್ಗೊಂಡಿದ್ದರು.
ವರದಿ : ಶ್ರೀನಿವಾಸಲು ಎ