IMG 20200917 WA0044

ಬಿಎಸ್ ವೈ: ಸಂಪುಟ ವಿಸ್ತರಣೆ..?

STATE POLATICAL

ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ದೆಹಲಿಯಲ್ಲಿ ಮುಖ್ಯಮಂತ್ರಿ

ನವದೆಹಲಿ,ಸೆಪ್ಟೆಂಬರ್ 17 ( ಕರ್ನಾಟಕ ವಾರ್ತೆ ) :

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಮಧ್ಯಾಹ್ನ ನವದೆಹಲಿಗೆ ಆಗಮಿಸಿದರು.

ಸುಮಾರು ಆರು ತಿಂಗಳ ನಂತರ ರಾಷ್ಟ್ರದ ರಾಜಧಾನಿಗೆ ಆಗಮಿಸಿದ ಅವರನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರದ ವಿಶೇಷ ಪ್ರತಿನಿಧಿ ಶಂಕರ ಗೌಡ ಪಾಟೀಲ್ ಅವರು ಬರಮಾಡಿಕೊಂಡರು.

ಇದೇ ಸಂದರ್ಭದಲ್ಲಿ ತಮ್ಮನ್ನು ಭೇಟಿಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು ರಾಜ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ತಾವು ದೆಹಲಿಗೆ ಆಗಮಿಸಿರುವುದಾಗಿ ತಿಳಿಸಿದರು.

IMG 20200917 WA0045

ಎರಡು ದಿನಗಳ ತಮ್ಮ ಭೇಟಿಯ ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಳಗೊಂಡಂತೆ ಪ್ರಮುಖ ಕೇಂದ್ರ ಸಚಿವರನ್ನು ಹಾಗೂ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ ನಡ್ಡಾ ಅವರೂ ಸೇರಿದಂತೆ ಪಕ್ಷದ ಮುಖಂಡರನ್ನು ಭೇಟಿ ಮಾಡುವುದಾಗಿ ತಿಳಿಸಿದ ಯಡಿಯೂರಪ್ಪ ಅವರು ಪಕ್ಷದ ಗಣ್ಯರೊಂದಿಗೆ ರಾಜ್ಯ ಸಚಿವ ಸಂಪುಟದ ವಿಸ್ತರಣೆ ಕುರಿತಂತೆಯೂ ಚರ್ಚೆ ನಡೆಸುವ ತಮ್ಮ ಇಂಗಿತವನ್ನು ಬಹಿರಂಗಗೊಳಿಸಿದರು.