images 1

ಶಬರಿಮಲೆ ತೆರಳುವವರಿಗೆ ಸಹಾಯವಾಣಿ….!

Genaral STATE

ಶಬರಿಮಲೆ ಸಹಾಯವಾಣಿ

ಬೆಂಗಳೂರು, ನವೆಂಬರ್ 25 (ಕರ್ನಾಟಕ ವಾರ್ತೆ):
ಕೇರಳ ರಾಜ್ಯದ ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮದಲ್ಲಿ ತೆರಳುವ ಕರ್ನಾಟಕ ರಾಜ್ಯದ ಭಕ್ತಾದಿಗಳಿಗೆ/ಯಾತ್ರಾರ್ಥಿಗಳಿಗೆ ಸಂಬಂಧಿಸಿದಂತೆ ಕೇರಳ ಸರ್ಕಾರವು ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ.  ಕರ್ನಾಟಕದಿಂದ ತೆರಳುವ ಭಕ್ತಾದಿಗಳಿಗೆ ರಾಜ್ಯ ಧಾರ್ಮಿಕ ದತ್ತಿ ಆಯುಕ್ತ ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ.  ಯಾತ್ರಾರ್ಥಿಗಳು ಅಗತ್ಯ ಮಾಹಿತಿಗೆ ಹಾಗೂ ತುರ್ತು ಸಂದರ್ಭಗಳಲ್ಲಿ ಸಹಾಯವಾಣಿ ಟೋಲ್ ಫ್ರೀ ಸಂಖ್ಯೆ 080-26409689 ನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ