IMG 20210419 WA0010

ಕೊರೊನಾ ವಿರುದ್ಧ ರಾಜಕೀಯ ಹಿತಾಸಕ್ತಿ ಮೀರಿ ಹೋರಾಡಬೇಕಾಗಿದೆ…!

Genaral STATE

* ಮಂಗಳವಾರ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಸಭೆ

* ಲೋಕಸಭೆ ಸಚಿವಾಲಯ ದೇಶದ ಎಲ್ಲಾ ಸ್ಪೀಕರ್, ಸಭಾಪತಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಪ್ರತಿಪಕ್ಷಗಳ ನಾಯಕರ ಜೊತೆ  ವಿಡಿಯೋ ಸಂವಾದ ನಡೆಸಿದರು.

ಬೆಂಗಳೂರು: ಎಲ್ಲ ರಾಜಕೀಯ ಪಕ್ಷಗಳು ರಾಜಕೀಯ ಹಿತಾಸಕ್ತಿಯನ್ನು ಮೀರಿ ರೂಪಾಂತರಗೊಂಡಿರುವ ಕೊರೊನಾ ಎರಡನೇ ಹಲ್ಲೆಯ ವಿರುದ್ಧ ಹೋರಾಟ ಮಾಡಬೇಕಾಗಿದೆ ಎಂಬ ಸಂದೇಶವನ್ನು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸಾರಿದರು‌.

ಲೋಕಸಭೆ ಸಚಿವಾಲಯ ದೇಶದ ಎಲ್ಲಾ ಸ್ಪೀಕರ್, ಸಭಾಪತಿ, ಸಂಸದೀಯ ವ್ಯವಹಾರಗಳ ಖಾತೆ ಸಚಿವರು ಹಾಗೂ ಪ್ರತಿಪಕ್ಷಗಳ ನಾಯಕರ ಜೊತೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.IMG 20210419 WA0004

ಎಲ್ಲ ಜನಪ್ರತಿನಿಧಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕಾಗಿದೆ. ಸರಕಾರದ ಜೊತೆ ಸಹಕರಿಸುವ ಅಗತ್ಯವಿದೆ. ಜನ ಎಚ್ಚರಿಕೆಯಿಂದ ಇರುವಂತೆ ಜನಜಾಗೃತಿ ಮೂಡಿಸಬೇಕಾಗಿದೆ. ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡಿ ಅವುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರುವ ಮೂಲಕ ವಿರುದ್ಧ ಸಮರ ಸಾರಬೇಕಾದ ಕೆಲಸ ಜನ ಪ್ರತಿನಿಧಿಗಳದ್ದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.IMG 20210419 WA0012

ಎಲ್ಲ ರಾಜಕೀಯ ಪಕ್ಷಗಳು ರಾಜಕೀಯವನ್ನು ಬದಿಗೊತ್ತಿ, ರಾಜಕೀಯ ಹಿತಾಸಕ್ತಿಯನ್ನು ಮೀರಿ ಕೆಲಸ ಮಾಡಬೇಕಾಗುತ್ತದೆ. ಆಗಮಾತ್ರ ಈ ಮಹಾಮಾರಿ ಕರೋನ ವಿರುದ್ಧ ಹೋರಾಡಲು ಸಾಧ್ಯ ಎಂದು ಅವರು ಹೇಳಿದರು.

ಮಂಗಳವಾರ ರಾಜ್ಯಪಾಲರಾದ ವಜುಭಾಯ್ ವಾಲಾ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸರ್ವ ಪಕ್ಷಗಳ ಸಭೆ ನಡೆಯಲಿದೆ. ಸಭೆಯಲ್ಲಿ ಉಭಯ ಸದನಗಳ ಸಭಾ ನಾಯಕರು, ಪ್ರತಿಪಕ್ಷಗಳ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕೊರೊನಾ ವಿರುದ್ಧ ಹೋರಾಟ ಮಾಡುವ  ಕುರಿತು ಸಭೆಯಲ್ಲಿ ಸಮಾಲೋಚನೆ ನಡೆಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರು ತಿಳಿಸಿದರು