IMG 20210425 WA0020

ಕೊರೊನಾ ನಿರ್ವಹಣೆ: ರಾಜ್ಯಕ್ಕೆ ಕೇಂದ್ರದ ಸಂಪೂರ್ಣ ಸಹಕಾರ….!

Genaral STATE

ರಾಜ್ಯದಲ್ಲಿ ವಾರಾಂತ್ಯದ ಕರ್ಪ್ಯೂ ಯಶಸ್ವಿಯಾಗಿದೆ

ಕೊರೊನಾ ನಿರ್ವಹಣೆ: ರಾಜ್ಯಕ್ಕೆ ಕೇಂದ್ರದ ಸಂಪೂರ್ಣ ಸಹಕಾರ

ಬೆಂಗಳೂರು, ಏಪ್ರಿಲ್ 25 – ಕೊರೊನಾ ವಿರುದ್ಧದ ಹೋರಾಟದಲ್ಲಿ ಅಗತ್ಯವಾದ ಔಷಧ, ಲಸಿಕೆ, ಆಮ್ಲಜನಕ ಪೂರೈಕೆ ಸೇರಿದಂತೆ ಎಲ್ಲ ನೆರವು ನೀಡುವುದಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದೆ.
ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ವಿಧಾನ ಸೌಧದಲ್ಲಿ ಇಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್, ಮುಖ್ಯಕಾರ್ಯದರ್ಶಿ ಪಿ ರವಿಕುಮಾರ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಕ್ತರ್, ಮುಖ್ಯಮ‍ಂತ್ರಿಯವರ ಪ್ರಧಾನ ಕಾರ್ಯದರ್ಶಿ ರಮಣ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳ ಜೊತೆ ಪರಿಣಾಮಕಾರಿಯಾಗಿ ಕೊರೊನಾ ನಿಯಂತ್ರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದರು.

ಈ ಸಾಂಕ್ರಾಮಿಕವನ್ನು ಮಣಿಸಲು ಎಲ್ಲರೂ ಸಂಯುಕ್ತವಾಗಿ ಕಾರ್ಯನಿರ್ವಹಿಸಬೇಕಿದೆ. ರಾಜ್ಯಕ್ಕೆ ಅಗತ್ಯವಾದ ಎಲ್ಲ ರೀತಿಯ ನೆರವು ನೀಡಲು ಕೇಂದ್ರ ಸರ್ಕಾರವು ಸದಾ ಸಿದ್ಧವಿದೆ. ಕೊರೊನಾ ಪರಿಸ್ಥಿತಿ ಬಗ್ಗೆ, ತುರ್ತು ನೆರವಿನ ಬಗ್ಗೆ, ರೆಮ್ಡೆಸಿವರ್ ಮತ್ತಿತರ ಔಷಧಿಗಳ ಅಗತ್ಯತೆ ಬಗ್ಗೆ ನಿರಂತರವಾಗಿ ಮಾಹಿತಿ ವಿನಿಮಯ ಮಾಡಿಕೊಳ್ಳಿ. ರಾಜ್ಯಕ್ಕೆ ಅಗತ್ಯ ನೆರವು ಒದಗಿಸುವುದಕ್ಕಾಗಿಯೇ ದೆಹಲಿಯ ತಮ್ಮ ಕಚೇರಿಯಲ್ಲಿ ಹಿರಿಯ ಅಧಿಕಾರಿಯೊಬ್ಬರನ್ನು ನಿಯೋಜಿಸಿರುವುದಾಗಿ ಸಚಿವರು ಹೇಳಿದರು.IMG 20210425 WA0019

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ – ರಾಜ್ಯಕ್ಕೆ ಏಪ್ರಿಲ್ 30ರವರೆಗಿನ ಬಳಕೆಗಾಗಿ ಕನಿಷ್ಠ ಪಕ್ಷ 1 ಲಕ್ಷ ರೆಮ್ಡೆಸಿವರ್ ವಯಲ್ಸ್ ಬೇಕು ಎಂದು ರಾಜ್ಯ ಸರ್ಕಾರ ಬೇಡಿಕೆ ಇಟ್ಟಿತ್ತು. ಈಗ 1.22 ಲಕ್ಷ ವಯಲ್ಸ್ ಹಂಚಿಕೆ ಮಾಡಲಾಗಿದೆ. ಅದೇ ರೀತಿ 800 ಮೆಟ್ರಿಕ್ ಟನ್ ಆಮ್ಲಜನಕ ಹಂಚಿಕೆ ಮಾಡಲಾಗಿದೆ. ಇದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರನ್ನು ಅಭಿನಂದಿಸುವುದಾಗಿ ತಿಳಿಸಿದರು.

ರಾಜ್ಯವೊಂದರಲ್ಲಿ ಕೊರೊನಾ ಸೋಂಕಿತರು ಬಳಸುವ ಆಮ್ಲಜನಕ ಪ್ರಮಾಣಕ್ಕೆ ಅನುಗುಣವಾಗಿ ರೆಮ್ಡೆಸಿವಿರ್ ಹಂಚಿಕೆ ಮಾಡಲಾಗುತ್ತಿತ್ತು. ಹೀಗಾಗಿ ರಾಜ್ಯಕ್ಕೆ ಆರಂಭದಲ್ಲಿ ಕೇವಲ 25 ಸಾವಿರ ವಯಲ್ಸ್ ಹಂಚಿಕೆಯಾಗಿತ್ತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಹೆಚ್ಚಿನ ವಯಲ್ಸ್ ಹಂಚಿಕೆಗೆ ಬೇಡಿಕೆ ಇಟ್ಟಿದ್ದರು. ನಂತರ ತಮ್ಮ ಮಧ್ಯಪ್ರವೇಶದಿಂದ ಮತ್ತೆ 25 ಸಾವಿರ ವಯಲ್ಸ್ ಒದಗಿಸಲಾಗಿತ್ತು. ಆಮ್ಲಜನಕ ಬಳಕೆ ಪ್ರಮಾಣ ಮೇಲೆ ರೆಮ್ಡೆಸಿವರ್ ಪ್ರಮಾಣ ನಿಗದಿ ಮಾಡುವುದು ಸರಿಯಲ್ಲ. ಕೊರೊನಾ ಪೀಡಿತರ ಸಂಖ್ಯೆಯ ಮೇಲೆ ಇದರ ಹಂಚಿಕೆಯಾಗಬೇಕು ಎಂಬುದು ರಾಜ್ಯಗಳ ಹಾಗೂ ನಮ್ಮೆಲ್ಲರ ಅಭಿಪ್ರಾಯವಾಗಿತ್ತು. ನಿನ್ನೆ ಇದರ ಪ್ರಕಾರವೇ ರೆಮ್ಡೆಸಿವರ್ ಮರುಹಂಚಿಕೆ ಮಾಡಲಾಗಿದೆ ಎಂದರು.

ಲಸಿಕಾ ಅಭಿಯಾನಕ್ಕೆ ವೇಗ ನೀಡಲು ರಾಜ್ಯವು ಹೆಚ್ಚಿನ ಲಸಿಕೆ ಪೂರೈಕೆಗೆ ಬೇಡಿಕೆ ಇಟ್ಟಿದೆ. ಸದ್ಯ ಪ್ರತಿದಿನ ಸುಮಾರು 2.5 ಲಕ್ಷ ಜನರಿಗೆ ಕೊವಿಡ್ ಲಸಿಕೆ ನೀಡಲಾಗುತ್ತಿದ್ದು ಅದನ್ನು 4 ಲಕ್ಷಕ್ಕೆ ಏರಿಸಲು ಉದ್ದೇಶಿಸಿದೆ. ರಾಜ್ಯದ ಬೇಡಿಕೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ಪ್ರಸ್ತಾವಿಸುವುದಾಗಿ ತಿಳಿಸಿದರು.IMG 20210425 WA0035

ಮುಂಬರುವ ದಿನಗಳಲ್ಲಿ ರಾಜ್ಯದ ಆಮ್ಲಜನಕ ಬಳಕೆ ಹೆಚ್ಚಳವಾಗಲಿದ್ದು 1400 ಮೆಟ್ರಿಕ್ ಟನ್ ಬೇಕು ಎಂಬ ಬೇಡಿಕೆ ಬಂದಿದೆ. ಅದನ್ನು ಪೂರೈಸಲೂ ನಾವು ಪ್ರಯತ್ನ ಮಾಡುತ್ತೇವೆ ಎಂದರು.
ಬೆಂಗಳೂರು ಅತ್ಯಂತ ಹೆಚ್ಚು ಕೊರೊನಾ ಪ್ರಕರಣ ಕಂಡ ನಗರವಾಗಿದೆ. ಇನ್ನೂ ಹತ್ತು ದಿನ ಪರಿಸ್ಥಿತಿ ಕಠಿಣವಾಗಿಯೇ ಇರಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಎರಡನೇ ಸುತ್ತಿನ ಲಸಿಕೆ ಪಡೆಯಲು ಲಸಿಕೆ ಕೊರತೆಯಾದದ್ದು ತಮ್ಮ ಗಮನಕ್ಕೆ ಬಂದಿಲ್ಲ. ಇದಕ್ಕೆ ಯಾವುದೇ ತೊಂದರೆಯಾಗಬಾರದು. ಎಲ್ಲರಿಗೂ ಲಸಿಕೆ ನೀಡುವ ಜವಾಬ್ಧಾರಿ ನಮ್ಮದು (ಸರ್ಕಾರದ್ದು). ಹಾಗೆಯೇ ಲಸಿಕೆ ಪಡೆಯುವ ಜವಾಬ್ದಾರಿ ಜನರದ್ದು. ಕೊರೊನಾ ಮೂರನೇ ಅಲೆ ಎದುರಿಸಲು ಇದು ಅತ್ಯವಶ್ಯ ಎಂದರು.

ರಾಜ್ಯದಲ್ಲಿ ವಾರಾಂತ್ಯದ ಕರ್ಪ್ಯೂ ಯಶಸ್ವಿಯಾಗಿದೆ. ಇದನ್ನು ಮುಂದಿನ ವಾರಾಂತ್ಯವೂ ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಮತ್ತವರ ಸಂಪುಟ ಸದಸ್ಯರು ನಿರ್ಧರಿಸುತ್ತಾರೆ. ಈ ಬಗ್ಗೆ ತಾವು ಏನೂ ಹೇಳಬಯಸುವುದಿಲ್ಲ ಎಂದು ಸದಾನಂದಗೌಡ ಹೇಳಿದರು. ಸಚಿವ ಡಾ ಸುಧಾಕರ್, ವಿಧಾನ ಪರಿಷತ್ ಸದಸ್ಯ ಡಾ ವೈ ಎ ನಾರಾಯಣಸ್ವಾಮಿ ಉಪಸ್ಥಿತರಿದ್ದರು.