images 4

KSRTC: ಹೆಚ್ಚುವರಿ ಬಸ್ ವ್ಯವಸ್ಥೆ….!

Genaral STATE

*ನಾಳೆ ಸಾರಿಗೆ ನಿಗಮಗಳಿಂದ ವಿಶೇಷ ಹೆಚ್ಚುವರಿ ಬಸ್ ವ್ಯವಸ್ಥೆ- ಡಿಸಿಎಂ ಸವದಿ ಸ್ಪಷ್ಟನೆ*

ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ನಮ್ಮ 3 ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ.
ಈ ಬಸ್ಸುಗಳು ಬೆಂಗಳೂರಿನಿಂದ ಹೊರಗಡೆ
ಮತ್ತು ಬೇರೆ ಬೇರೆ ಪ್ರದೇಶಗಳಿಂದ ಬೆಂಗಳೂರಿಗೆ ಮತ್ತು ಇತರ ಪ್ರದೇಶಗಳಿಗೆ ಸಂಚರಿಸಲಿವೆ ಎಂದು ಶ್ರೀ ಸವದಿಯವರು ತಿಳಿಸಿದ್ದಾರೆ.

ನಾಳೆ ರಾತ್ರಿಯ ನಿಗದಿತ ಕರ್ಫ್ಯೂ ಸಮಯದ ಒಳಗೆ ಸಂಚರಿಸಲಿರುವ ಬಸ್ಸುಗಳ ಈ ವಿಶೇಷ ವ್ಯವಸ್ಥೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕೆoದು ನಾನು ಸಾರ್ವಜನಿಕರಲ್ಲಿ ಮಾಡಿಕೊಳ್ಳುತ್ತೇನೆ ಎಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ತಿಳಿಸಿದ್ದಾರೆ.

ನಾಳೆ ರಾತ್ರಿಯ ಒಳಗೆ ತಮ್ಮ ಸ್ಥಳಕ್ಕೆ ತಲುಪಬೇಕಾದ ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ, ನಿಗದಿತ ಕೋವಿಡ್ ಮಾರ್ಗಸೂಚಿ ಅನ್ವಯ ಮುಂಜಾಗ್ರತೆ ವಹಿಸಿ ಈ ಸಾರಿಗೆ ವ್ಯವಸ್ಥೆಯನ್ನು ಸೂಕ್ತವಾಗಿ ಬಳಸಿಕೊಳ್ಳಬಹುದಾಗಿದೆ ಎಂದು  ಸಾರಿಗೆ ಸಚಿವ  ಲಕ್ಷ್ಮಣ ಸವದಿ ಅವರು  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.